ದಾವಣಗೆರೆ: ನ್ಯಾಮತಿ ಬಳಿಯ ದಾನಿಹಳ್ಳಿ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಕಾರು ಮರಕ್ಕೆ ಗುದ್ದಿ ಓರ್ವ ಪೊಲೀಸ್ ಸಾವನ್ನಪ್ಪಿದ್ದಾರೆ.
ಮೃತರನ್ನು 34 ವರ್ಷದ ಸಿದ್ದೇಶ್ ಎಂದು ಗುರುತಿಸಲಾಗಿದೆ. ದಾವಣಗೆರೆ DAR ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದೇಶ್ ಮಂಗಳೂರಿಗೆ ಹೊರಟಿದ್ದರು. ತಮ್ಮ ಭಾವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಕರೆದುಕೊಂಡು ಬರಲು ಸಿದ್ದೇಶ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿದ್ದ ಕಾರು ಮರಕ್ಕೆ ಗುದ್ದಿ ಅಪಘಾತವಾಗಿದೆ.
ಇವರ ಸಾವಿಗೆ ಪೊಲೀಸ್ ಇಲಾಖೆ ಮತ್ತು ಎಸ್ಪಿ ಉಮಾ ಪ್ರಶಾಂತ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.