ದಾವಣಗೆರೆ: ಜಿಲ್ಲೆಯಲ್ಲಿ ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಸವಳಂಗ – ಶಿಕಾರಿಪುರ ಹೆದ್ದಾರಿ ರಸ್ತೆಯ ಸರ್ಕಾರಿ ಆಸ್ಪತ್ರೆ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್ ಚಕ್ರದ ಅಡಿಗೆ ಸಿಲುಕಿ ಶ್ರೀನಿವಾಸ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಮೃತಪಟ್ಟ ಬೈಕ್ ಸವಾರ 34 ವರ್ಷದ ಶ್ರೀನಿವಾಸ್, ಸವಳಂಗದಿಂದ ಸ್ವಗ್ರಾಮ ಮಾದಾಪುರಕ್ಕೆ ಹೋಗುತ್ತಿದ್ದ ವೇಳೆ ಶಿಕಾರಿಪುರದಿಂದ ಸವಳಂಗ ಕಡೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.