ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸೋದರ ಪುತ್ರನ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಚಂದ್ರಶೇಖರ್ ತಂದೆ, ಸಂಸದ ರಮೇಶ್ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇಹದ ಮೇಲೆ ಗಾಯದ ಗುರುತುಗಳಿದ್ದು, ಚಂದ್ರಶೇಖರ್ ಅವರ ಕೈಕಾಲುಗಳನ್ನು ಕಟ್ಟಿ ಹಾಕಿರುವಂತಿದೆ ಎಂದು ರಮೇಶ್ ದೂರಿನಲ್ಲಿ ಆರೋಪಿಸಿದ್ದಾರೆ.
ಹೊನ್ನಾಳಿ ಪೊಲೀಸರು ಪೊಲೀಸರು ಸೆಕ್ಷನ್ 302 (ಕೊಲೆ), 201 (ಅಪರಾಧದ ಸಾಕ್ಷ್ಯಾಧಾರಗಳನ್ನು ಕಣ್ಮರೆಯಾಗುವಂತೆ ಮಾಡುವುದು ಅಥವಾ ಅಪರಾಧಿಗಳಿಗೆ ತಪ್ಪು ಮಾಹಿತಿ ನೀಡುವುದು) ಮತ್ತು 427 (ಹಾನಿ ಉಂಟುಮಾಡುವ ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ 24ರ ಹರೆಯದ ಪುತ್ರ ಅಕ್ಟೋಬರ್ 30ರ ಭಾನುವಾರ ನಾಪತ್ತೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಅಕ್ಟೋಬರ್ 3ರ ಗುರುವಾರದಂದು ಹೊನ್ನಾಳಿ ಸಮೀಪದ ಕಾಲುವೆಯಲ್ಲಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.