ದಾವಣಗೆರೆ: ಹರಿಹರದ ವೀರಶೈವ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿದ ಶಾ

ದಾವಣಗೆರೆ: ಕರ್ನಾಟಕ ಚುನಾವಣಾ ಪ್ರಯುಕ್ತ ರಾಜ್ಯದ ಉದ್ದಗಲಗಳನ್ನು ಸುತ್ತುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಹರದಲ್ಲಿರುವ ವೀರಶೈವ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿದ್ದರು.

ಶ್ವಾಸ ಗುರೂಜಿ, ಹರಿಹರ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿಯವರ ಜೊತೆ ಕೆಲ ಕಾಲ ಕಳೆದ ಅಮಿತ್ ಶಾ, ಹಲವು ವಿಷಯಗಳ ಕುರಿತು ಜಿಜ್ಞಾಸೆ ನಡೆಸಿದರು. ಈ ಭೇಟಿಯ ಕುರಿತು ತಮಗಾದ ಅನುಭವವನ್ನು ಹಂಚಿಕೊಂಡ ವಚನಾನಂದ ಸ್ವಾಮೀಜಿಯವರು, ಅಖಂಡ ಭಾರತದ ನಿರ್ಮಾಣದಲ್ಲಿ ನಿರತವಾಗಿರುವ ಅಮಿತ್ ಶಾ., ಕೇವಲ ಚುನಾವಣಾ ಚಾಣಕ್ಯ ಮಾತ್ರವಲ್ಲದೇ, ಭಾರತದ ಮಾಣಿಕ್ಯವೆಂದು ಬಣ್ಣಿಸಿದರು. ಶಾ ಕೇವಲ ಒಬ್ಬ ರಾಜಕಾರಣಿಯಿಲ್ಲದೆ, ಒಬ್ಬ ಅದ್ಭುತ ಜಿಜ್ಞಾಸು ಮತ್ತು ಆಳವಾದ ಆಧ್ಯಾತ್ಮಿಕ ತಳಹದಿ ಹೊಂದಿರುವ ವ್ಯಕ್ತಿ ಎಂದು ಹೊಗಳಿದರು.

ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ: ಹರಿಹರ ಪೀಠಕ್ಕೆ ಭೇಟಿ ನೀಡಿ, ಔಪಚಾರಿಕ ಗೌರವಗಳನ್ನು ಸ್ವೀಕರಿಸಿ, ಸ್ವಾಮೀಜಿಗಳಿಗೆ ವಂದನೆ ಸಲ್ಲಿಸಿದ ಅಮಿತ್ ಶಾ ಒಂದು ಕ್ಷಣ ಮೌನವಾಗಿ, ಅಲ್ಲಿದ್ದ ಶ್ರೀಚಕ್ರದ ಕಲಾಕೃತಿಯನ್ನು ಗಮನವಿಟ್ಟು ನೋಡಿ, ಅದು ಅದ್ಭುತವಾಗಿದೆ ಎಂದು ಬಣ್ಣಿಸುತ್ತಾ ಲಿಂಗಾಯತ ಧರ್ಮದಲ್ಲಿ ಕುಂಡಲನಿ ಯೋಗದ ಕುರಿತಾದ ಮಾಹಿತಿಯ ಬಗ್ಗೆ ವಿಚಾರಿಸಿದರು. ಇದಕ್ಕೆ ವಚನಾನಂದ ಸ್ವಾಮೀಜಿಯವರ ಸಮರ್ಪಕ ಉತ್ತರಗಳನ್ನು ಗಮನವಿಟ್ಟು ಕೇಳುತ್ತಾ, ಹಾಗೇ ಸ್ವಾಮೀಜಿ ಹೃಷಿಕೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದನ್ನು ತಿಳಿದು, ಅಲ್ಲಿನ ಸ್ವಾಮಿ ರಾಮರ ಬಗ್ಗೆ ಕೂಡ ಮಾತನಾಡಿದರು. ಹಾಗೆ ತಾವು ಮೂರು ದಿನಗಳ ಕಾಲ ಜೋಷಿ ಮಠದಲ್ಲಿ ತಂಗಿದ್ದು, ಕೇದಾರನಾಥಕ್ಕೆ ಹೋಗಿ ಶಂಕರರ ಪ್ರತಿಮೆ ಸ್ಥಾಪನೆ ಮಾಡಿದ ಬಗ್ಗೆ ಹೇಳುತ್ತಾ ಶಂಕರಾಚಾರ್ಯರ ಸಾಧನೆಗಳನ್ನು ಕೊಂಡಾಡಿದರು. ಸುಮಾರು 800 ವರ್ಷಗಳ ಹಿಂದೆ ಶಂಕರರು ಅಲ್ಲಿನ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದನ್ನು ತಿಳಿದುಕೊಂಡು, ತಾವು ಕೂಡ ಹರಿಹರೇಶ್ವರನ ದರ್ಶನ ಪಡೆದರು.

ಅಖಂಡ ಭಾರತ ನಿರ್ಮಾಣ ಏಕಮೇವ ಧ್ಯೇಯ: ವಚನಾನಂದ ಸ್ವಾಮೀಜಿಯವರು ಭಾರತದ ಭೂಪಟದ ಮುಂದೆ ನಿಂತ ಭಾವಚಿತ್ರವನ್ನು ನೋಡಿ, ಶಾ ಭಾವುಕರಾಗಿ ಅಶ್ರುಪೂರ್ಣರಾದರು. ಈ ಕುರಿತು ಸ್ವಾಮೀಜಿ ವಿಚಾರಿಸಲು, ‘ಭಾರತ ವಿಶ್ವಗುರುವಾಗಬೇಕು, ಅಖಂಡ ಭಾರತ ನಿರ್ಮಾಣಕ್ಕೆ ನಿಮ್ಮಂತಹ ಸಂತ-ಮಹಂತರ ಆಶೀರ್ವಾದಗಳು ಬೇಕು’ ಎಂದು ಭಾವೋದ್ರೇಕಕ್ಕೆ ಒಳಗಾದರು. ಹಾಗೇ ಸ್ವಾಮೀಜಿಯವರಿಂದ ಅಖಂಡ ಭಾರತದ ರಕ್ಷಣೆಗಾಗಿ ಹೋರಾಡಿದ್ದ ಕರ್ನಾಟಕದ ವೀರ ವನಿತೆಯರಾದ ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಮುಂತಾದವರ ಬಗ್ಗೆ ಕುತೂಹಲದಿಂದ ತಿಳಿದುಕೊಂಡರು.

ಹರಿಹರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರೂ, ಸ್ವಾಮೀಜಿಯವರ ಹತ್ತಿರ ಯಾವುದೇ ರಾಜಕಾರಣ ಬಗ್ಗೆ ಮಾತನಾಡದೇ, ಯೋಗ, ಆಧ್ಯಾತ್ಮ ಸಾಧನೆ, ಸಿದ್ದಿಗಳ ಕುರಿತಷ್ಟೇ ಮಾತನಾಡಿ, ಧರ್ಮದಲ್ಲಿ ರಾಜಕಾರಣ ಬೆರಸದೇ ಮಾದರಿ ಪ್ರವರ್ತನೆಯನ್ನು ಪ್ರದರ್ಶಿಸಿದರು. ಹಾಗೇ ಕಾಶ್ಮೀರದ ವಿಷಯ ಮಾತನಾಡುವಾಗಲೂ ಯಾವುದೇ ಧಾರ್ಮಿಕತೆ ಮತ್ತು ರಾಜಕಾರಣ ಲೇಪವಿಲ್ಲದೆ, ಅದು ನಮ್ಮದು ಎಂಬ ದೇಶಭಕ್ತಿಯ ಭಾವದಿಂದ ಮಾತನಾಡುತ್ತಾ, ಅಲ್ಲಿ ಕಲಂ 370 ತೆಗೆದುಹಾಕವುದು ಅಲ್ಲಿನ ಶಾಂತಿಗೆ ಅನಿವಾರ್ಯವಾಗಿತ್ತು ಎಂದು ಪ್ರತಿಕ್ರಿಯಿಸಿದರು.

ಶಾರ ಈ ಭೇಟಿಯ ಬಗ್ಗೆ ಮಾತನಾಡುತ್ತಾ, ವಚನಾನಂದ ಸ್ವಾಮೀಜಿಯವರು ಅಮಿತ್ ಶಾ ಕೇವಲ ಒಬ್ಬ ರಾಜಕಾರಣಿಯಾಗಿರದೇ, ಒಂದು ಸಮ್ಮೋಹಕ ಶಕ್ತಿಯನ್ನು ಹೊಂದಿರುವ, ದೈವಿಕ ಚೈತನ್ಯವಿರುವ ವ್ಯಕ್ತಿಯೆಂದು ಹೊಗಳಿದರು. ಮಗಧರ ಕಾಲದಲ್ಲಿ ದುಷ್ಟ ನಂದರನ್ನು ಸಂಹರಿಸಿ, ಇಡೀ ಸಾಮ್ರಾಜ್ಯವನ್ನು ಒಂದುಗೂಡಿಸಿ ದೇಶ ಕಟ್ಟಿದ ಚಾಣಕ್ಯನಂತೆ ಅಮಿತ್ ಶಾ ದೇಶ ವಿರೋಧಿ ಶಕ್ತಿಗಳನ್ನು ಹೆಡೆಮುರಿಕಟ್ಟುತ್ತಾ ಅಖಂಡ ಭಾರತ ನಿರ್ಮಾಣಕ್ಕೆ ತೊಡಗಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಒತ್ತಾಸೆಯಂತೆ, ಗೃಹ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡ ಅಮಿತ್ ಶಾ ನಂತರ ಕಾಶ್ಮೀರದಲ್ಲಿ ವಿಧಿ 370 ತೆಗೆದು ಹಾಕಿ, ಅದನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದರು. ಈಶಾನ್ಯ ಭಾರತದ ಹಲವು ದಶಕಗಳ ಗಡಿ ವಿವಾದಗಳಿಗೆ ತೆರೆ ಎಳೆಯುತ್ತಾ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ತೀವ್ರವಾದಿಗಳು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ. ಹೀಗೆ ತಮ್ಮ ದೃಢ ನಿರ್ಧಾರಗಳಿಗೆ ಹೆಸರಾಗಿರುವ ಅಮಿತ್ ಶಾ ದೇಶದ ಭದ್ರತೆ ಮತ್ತು ಅಖಂಡತೆಗೆ ಬಹುಮೌಲಿಕ ಕೊಡುಗೆ ನೀಡುತ್ತಿದ್ದಾರೆ ಎಂದರು.

Ashika S

Recent Posts

ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ: 182 ಗ್ರಾಂ ಚಿನ್ನಾಭರಣ, 52 ಲಕ್ಷ ನಗದು ಕಳ್ಳತನ

ಸಾಲ ಮಾಡಿಕೊಂಡಿದ್ದ ತಂಗಿ ಹಣಕ್ಕಾಗಿ ಸ್ವಂತ ಅಕ್ಕನ ಮನೆಯಿಂದಲೇ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ…

5 mins ago

ಪ್ರಜ್ವಲ್ ವಿಡಿಯೋ ಕೇಸ್: “ಎಸ್​ಐಟಿ ಎಂದರೆ ಸಿದ್ದು, ಶಿವಕುಮಾರ್ ಟೀಂ”

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ,…

6 mins ago

ಮಗಳ ಜೊತೆ ಬಂದು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಆಲಗೂರ್

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ‌ ಪ್ರೊ. ರಾಜು ಆಲಗೂರ ಅವರು ಇಂದು ಬೆಳಗ್ಗೆ ತಮ್ಮ ಸ್ವಗ್ರಾಮ ತೊರವಿಯಲ್ಲಿ ಮಗಳು ಭವಾನಿಯೊಂದಿಗೆ ಆಗಮಿಸಿ…

27 mins ago

ಬಂಟವಾಳದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

43 mins ago

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ಎಲ್ಲಿ ಮತದಾನ ಮಾಡ್ತಾರೆ ಗೊತ್ತಾ?

ಸ್ಯಾಂಡಲ್‌ವುಡ್‌ ಡಿವೈನ್ ಸ್ಟಾರ್‌ ರಿಷಬ್ ಶೆಟ್ಟಿ ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೇ-7 ರ ಇಂದು ಲೋಕಸಭಾ ಚುನಾವಣೆಯ ಎರಡನೇ…

47 mins ago

ಬಿಟ್ ಕಾಯಿನ್ ಹಗರಣ ಕೇಸ್‌ : ಆರೋಪಿ ಶ್ರೀಕಿ ಬಂಧನ

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ…

53 mins ago