ದಾವಣಗೆರೆ: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆನಗೋಡ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳಾದ ಪರಶುರಾಮ್ (24), ಸಂದೇಶ್ (23) ಮತ್ತು ಶಿವು (26) ಎಂದು ಗುರುತಿಸಲಾಗಿದೆ. ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸ್ಥಳೀಯರಿಂದ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದಾರೆ.
ಅಪಘಾತಕ್ಕೀಡಾದ ವಾಹನದ ಬಗ್ಗೆ ಪೊಲೀಸರಿಗೆ ಈವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.