ದಾವಣಗೆರೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮತ್ತೆ ಹರಿಹಾಯ್ದಿದ್ದಾರೆ. ಅವರ ಪಾಪದ ಕೊಡ ತುಂಬಿದೆ. ಇದೇ ಕಾರಣಕ್ಕೆ ಇಬ್ಬರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ವಿ ಸೋಮಣ್ಣ ಮಹಾ ಸುಳ್ಳುಗಾರ. ಸುಳ್ಳನ್ನ ಸತ್ಯ ಮಾಡುವ ಕಲೆ ಇವರಿಗೆ ಮಾತ್ರ ಗೊತ್ತು. ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡಿ ಗೆದ್ದು ಸಿಎಂ ಆಗಬೇಕೇಂಬ ಉತ್ಸಾಹದಲ್ಲಿದ್ದರು ಸೋಮಣ್ಣ. ಜನರು ಯಡಿಯೂರಪ್ಪ ಮುಖ ನೋಡಿ ಮತ ಹಾಕಿದ್ದಾರೆ ಹೊರತು, ಸೋಮಣ್ಣರನ್ನು ನೋಡಿ ಯಾರು ಮತ ಹಾಕಿಹಾಕಿಲ್ಲ ಎಂದು ಹೇಳಿದ್ದಾರೆ.
ಸೋಮಣ್ಣ ಮಹಾ ಸುಳ್ಳುಗಾರ. ಯಡಿಯೂರಪ್ಪ ಅವರ ಉಪಕಾರ ಮರೆತಿದ್ದಾರೆ. ಈಗ ಅವರ ವಿರುದ್ದ ಮಾತಾಡುತ್ತಿದ್ದಾರೆ. ಶಾಸಕ ಯತ್ನಾಳ್ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುತ್ತಿಲ್ಲ. ಕೇವಲ ವಿಜಯೇಂದ್ರ ಹಾಗೂ ಯಡಿಯೂರಪ್ಪ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಹೇಳಿದ್ದಾರೆ.