ದಾವಣಗೆರೆ: ಇದ್ದಕ್ಕಿದ್ದಂತೆ ಮಾರುತಿ ಬೊಲೆರೊ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದಿರುವ ಘಟನೆ ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ನಡೆದಿದೆ.
ಶಿವಮೊಗ್ಗದ ಶಿಕಾರಿಪುರ ಮೂಲದ ನಾಗನಾಯಕ್ ಎನ್ನುವ ತಮ್ಮ ಕಾರಿನಲ್ಲಿ ದಾವಣಗೆರೆಗೆ ಬಂದಿದ್ದಾರೆ. ಬಳಿಕ ನಗರದ ಹದಡಿ ರಸ್ತೆಯಲ್ಲಿರುವ ವಿಶಾಲ್ ಮಾರ್ಟ್ನಲ್ಲಿ ಬಟ್ಟೆಗಳನ್ನು ಖರೀದಿ ಮಾಡಿದ್ದು ವಾಪಸ್ ಆಗುವಷ್ಟರಲ್ಲಿ ಇದ್ದಕ್ಕೆ ಇದ್ದಂತೆ ಕಾರು ಬೆಂಕಿಯಿಂದ ಧಗ ಧಗಿಸಿ ಉರಿದಿದೆ.
ಪರಿಣಾಮ ಕಾರೆಲ್ಲ ಸಂಫೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಕಾರಿನಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹೊತ್ತಿಕೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ.