ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿಯ ತುಂಗಭದ್ರ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ತುಂಗಭದ್ರ ನದಿ ಪಾತ್ರ ಮಕ್ಕಳಿಗೆ ಕ್ರಿಕೇಟ್ ಮೈದಾನವಾಗಿದೆ.
ದಾವಣಗೆರೆ ಹಾಗೂ ಹರಿಹರ ನಗರದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಬೆಣ್ಣೆನಗರಿಯಲ್ಲಿ ಕಾಲುವೆಗಳು ಖಾಲಿಯಾಗಿವೆ. ಎಲ್ಲೆಡೆ ನೀರಿಗೆ ಬರ ಆವರಿಸಿದೆ. ತೋಟಗಳಲ್ಲಿನ ಬೆಳೆಗಳು ಒಣಗುತ್ತಿವೆ. ರೊಚ್ಚಿಗೆದ್ದು ಕಾಲುವೆಗೆ ಇಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಭದ್ರಾ ಡ್ಯಾಂನಿಂದ 14 ದಿನ ನೀರು ಬಿಟ್ಟಿದ್ದರು ಕಾಲುವೆಗೆ ನೀರು ಹರಿದಿಲ್ಲ. ಜನ, ಜಾನುವಾರು, ತೋಟಗಳಿಗೆ ನೀರು ಸಿಗುತ್ತಿಲ್ಲ. ಕುಡಿಯಲು ಸಹ ನೀರು ಇಲ್ಲದೆ ಜನ ಪರದಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ಒಳಗೆ ನೀರು ಹರಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ರೈತರು ನಿರ್ಣಯ ತೆಗೆದುಕೊಂಡಿದ್ದಾರೆ.