News Karnataka Kannada
Monday, April 29 2024
ದಾವಣಗೆರೆ

ಬತ್ತಿ ಹೋದ ತುಂಗಭದ್ರ ನದಿ: ಕಾಲುವೆಗೆ ಇಳಿದು ರೈತರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿಯ ತುಂಗಭದ್ರ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ತುಂಗಭದ್ರ ನದಿ ಪಾತ್ರ ಮಕ್ಕಳಿಗೆ ಕ್ರಿಕೇಟ್ ಮೈದಾನವಾಗಿದೆ.
Photo Credit : NewsKarnataka

ದಾವಣಗೆರೆ:  ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿಯ ತುಂಗಭದ್ರ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ತುಂಗಭದ್ರ ನದಿ ಪಾತ್ರ ಮಕ್ಕಳಿಗೆ ಕ್ರಿಕೇಟ್ ಮೈದಾನವಾಗಿದೆ.

ದಾವಣಗೆರೆ ಹಾಗೂ ಹರಿಹರ ನಗರದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಬೆಣ್ಣೆನಗರಿಯಲ್ಲಿ ಕಾಲುವೆಗಳು ಖಾಲಿಯಾಗಿವೆ. ಎಲ್ಲೆಡೆ ನೀರಿಗೆ ಬರ ಆವರಿಸಿದೆ. ತೋಟಗಳಲ್ಲಿನ ಬೆಳೆಗಳು ಒಣಗುತ್ತಿವೆ. ರೊಚ್ಚಿಗೆದ್ದು ಕಾಲುವೆಗೆ ಇಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಭದ್ರಾ ಡ್ಯಾಂನಿಂದ 14 ದಿನ ನೀರು ಬಿಟ್ಟಿದ್ದರು ಕಾಲುವೆಗೆ ನೀರು ಹರಿದಿಲ್ಲ. ಜನ, ಜಾನುವಾರು, ತೋಟಗಳಿಗೆ ನೀರು ಸಿಗುತ್ತಿಲ್ಲ. ಕುಡಿಯಲು ಸಹ ನೀರು ಇಲ್ಲದೆ ಜನ ಪರದಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಳೆ ಒಳಗೆ ನೀರು ಹರಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ರೈತರು ನಿರ್ಣಯ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು