ಬೆಂಗಳೂರು: ಹಾಲಿನ ದರ ಹೆಚ್ಚಳ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಂಗಳವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಕೆಎಂಎಫ್ ನ ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ರೈತರು ಮತ್ತು ಹಾಲು ಒಕ್ಕೂಟಗಳೆರಡೂ ಸಂಕಷ್ಟದಲ್ಲಿದ್ದು ಹಾಲಿನ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ರೈತರು, ಹಾಲು ಒಕ್ಕೂಟಗಳು ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು, ಬೆಲೆಯನ್ನು ಹೆಚ್ಚಿಸಲಾಗುವುದು, ಹೆಚ್ಚಳದ ನಂತರ ಶೇ. 70ರಷ್ಟನ್ನು ರೈತರು ಮತ್ತು ಉಳಿದ ಹಾಲು ಒಕ್ಕೂಟಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ಹಲವು ಖಾಸಗಿ ಕಂಪನಿಗಳು ರೈತರಿಂದ ಖರೀದಿಸುವ ಒಂದು ಲೀಟರ್ ಹಾಲಿಗೆ 2-3 ರೂಪಾಯಿ ನೀಡುತ್ತಿವೆ. ಇದು ಹಾಲು ಒಕ್ಕೂಟಗಳ ಮೇಲೆ ಪರಿಣಾಮ ಬೀರುತ್ತಿದ್ದು, ಆ ಕಂಪನಿಗಳನ್ನು ನಿಯಂತ್ರಿಸುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ವೆಂಕಟೇಶ್ ಹೇಳಿದರು.