ಬೆಂಗಳೂರು: ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಜನರು ಹಬ್ಬ ಆಚರಣೆ ಅಂಗವಾಗಿ ಯತೇಚ್ಛವಾಗಿ ಪಟಾಕಿ ಸಿಡಿಸುತ್ತಿದ್ದು, ಉದ್ಯಾನನಗರಿಯಲ್ಲಿ ಹವಾಮಾನ ಗುಣಮಟ್ಟ ತೀವ್ರಪ್ರಮಾಣದಲ್ಲಿ ಕುಸಿದಿದೆ ಎಂದು ಹವಾಮಾನ ಸಂಸ್ಥೆ ಹೇಳಿದೆ.
ಬೆಂಗಳೂರಿನ ಜನತೆ ಕಳೆದ 2 ದಿನಗಳಿಂದ ದೀಪಾವಳಿ ಸಂಭ್ರಮಾಚರಣೆಯಲ್ಲಿರುವಂತೆಯೇ ಉದ್ಯಾನ ನಗರಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕ 193ಕ್ಕೇರಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ವರದಿ ಮಾಡಿದೆ. ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟ ಮಾಲಿನ್ಯ ಮಟ್ಟವನ್ನು ತಲುಪಿದ್ದು, ಇದು ತುಂಬಾ ಅನಾರೋಗ್ಯಕರವಾಗಿದೆ. ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಿದೆ.