ಬೆಂಗಳೂರು: ರಾಜ್ಯ ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ವಿರುದ್ಧ ‘ಎಕ್ಸ್’ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಆರ್ಎಸ್ ಪಕ್ಷದ ಕಾರ್ಯಕರ್ತನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷದ ಐಟಿ ಸೆಲ್ ವಿಭಾಗ ಕಾರ್ಯಕರ್ತ, ಕರೀಂ ನಗರದ ರವಿಕಾಂತಿ ಶರ್ಮಾ ಬಂಧಿತ ನಾಗಿದ್ದು, ಬಳಿಕ ಬಿಡುಗಡೆಗೊಳಿಸಿದ್ದಾರೆ.
ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಸಚಿವರ ಕುರಿತು ಆರೋಪಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದ.ಬ ಈತ ಪಕ್ಷದ ಐಟಿ ಸೆಲ್ನಲ್ಲಿ ಆತ ಕೆಲಸ ಮಾಡುತ್ತಿದ್ದ. ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಹಾಗೂ ಗೃಹಜ್ಯೋತಿ ಯೋಜನೆ ಅನುಷ್ಠಾನದ ಕುರಿತು ‘ಎಕ್ಸ್ ‘ನಲ್ಲಿ ಇಂಧನ ಸಚಿವರ ನಕಲಿ ಆಡಿಯೋ ತುಣುಕನ್ನು ಆತ ಪೋಸ್ಟ್ ಮಾಡಿದ್ದ.