News Karnataka Kannada
Monday, April 29 2024
ಬೆಂಗಳೂರು

ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ?: ನಾರಾಯಣಸ್ವಾಮಿ 

ಚಿತ್ರದುರ್ಗದಲ್ಲಿ ಅಹಿಂದ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಗಳಿಗೆ ಏಕವಚನ ಪ್ರಯೋಗ ಮಾಡಿದ್ದರು, ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ? ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಹಾಗೂ ಖರ್ಗೆಯವರಿಗೂ ಇವರು, ಇವನು, ಅವನು ಎಂದು ಏಕವಚನದಲ್ಲಿ ಕರೆಯುತ್ತಾರಾ? ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ  ಕಿಡಿಕಾರಿದ್ದಾರೆ.
Photo Credit : News Kannada

ಬೆಂಗಳೂರು:  ಚಿತ್ರದುರ್ಗದಲ್ಲಿ ಅಹಿಂದ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಗಳಿಗೆ ಏಕವಚನ ಪ್ರಯೋಗ ಮಾಡಿದ್ದರು, ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ? ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಹಾಗೂ ಖರ್ಗೆಯವರಿಗೂ ಇವರು, ಇವನು, ಅವನು ಎಂದು ಏಕವಚನದಲ್ಲಿ ಕರೆಯುತ್ತಾರಾ? ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ  ಕಿಡಿಕಾರಿದ್ದಾರೆ.

ನಗರದ ಬಿಜೆಪಿ  ಕಚೇರಿಯಲ್ಲಿ ಮಾತನಾಡಿದ ಅವರು, ಒಬ್ಬ ದಲಿತ ಹೆಣ್ಣು ಮಗಳಾಗಿರುವ ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿರೋದು ಖಂಡನೀಯ. ಹಳ್ಳಿಗಳಲ್ಲಿ ಹಾಗೇ ಕರೆಯೋದು ಎಂದು ಸಿಎಂ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಮೂಲಕ ಹಳ್ಳಿ ಜನರನ್ನೂ ಸಿಎಂ ಅಪಮಾನ ಮಾಡಿದ್ದಾರೆ. ಹಳ್ಳಿ ಜನರು ಎಲ್ಲರನ್ನೂ ಗೌರವದಿಂದ ಮಾತಾಡಿಸುತ್ತಾರೆ. ಸಿದ್ದರಾಮಯ್ಯ ಯಾಕೆ ಇಷ್ಟು ಸುಳ್ಳು ಹೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ, ಅಹಂಕಾರ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರಪತಿಗಳ ಬಣ್ಣದ ಬಗ್ಗೆಯೂ ಸಿದ್ದರಾಮಯ್ಯನವರು ಈ ಹಿಂದೆ ಕಾಮೆಂಟ್ ಮಾಡಿದ್ದರು. ನೀವು ಭಾಷೆ ಸರಿಪಡಿಸಿಕೊಳ್ಳಲು ಒಬ್ಬ ಟೀಚರ್‍ನ ನೇಮಿಸಿಕೊಳ್ಳಿ. ನಾನೇ ಬೇಕಾದ್ರೆ ನಿಮಗೆ ಟೀಚರ್ ಆಗಿ ಬಂದು ಭಾಷೆ ಬಳಕೆ ಹೇಳಿಕೊಡುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು