News Karnataka Kannada
Wednesday, May 08 2024
ಬೆಂಗಳೂರು

ಬೆಂಗಳೂರು: ಕೇಂದ್ರದಿಂದ ಅಕ್ಕಿ ಪುಕ್ಕಟೆಯಾಗಿ ಕೇಳಿರಲಿಲ್ಲ- ಸಚಿವ ಪಾಟೀಲ್‌

Didn't ask for rice free of cost from Centre, says Minister Patil
Photo Credit : Facebook

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಕರ್ನಾಟಕದ ಬಡವರಿಗೆ ವಿತರಿಸಲು ಅಗತ್ಯವಾಗಿರುವ ಅಕ್ಕಿಯನ್ನು ಕೇಂದ್ರ ಸರಕಾರದಿಂದ ಖರೀದಿಸಲು ಕೇಳಿದ್ದೇವು. ಇದರ ಹೊರತು ಪುಕ್ಕಟೆಯಾಗಿಯೇನೂ ಕೇಳಿರಲಿಲ್ಲ. ಆದರೆ ಕೇಂದ್ರದವರು ಇದರಲ್ಲೂ ರಾಜಕೀಯ ಮಾಡುವ ಮೂಲಕ ಬಡಜನ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಅಗತ್ಯದ ಬಗ್ಗೆ ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಹೇಳಿದ್ದೇವೆ. ಇನ್ನು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಧ್ವನಿ ಎತ್ತಬೇಕು. ದೇವರು ಇನ್ನಾದರೂ ಅವರಿಗೆ ಸದ್ಬುದ್ಧಿಯನ್ನು ಕೊಡಲಿ ಅಷ್ಟೆ ಎಂದು ಅವರು ಕುಟುಕಿದರು.

ಕಾಂಗ್ರೆಸ್ ಸಕಾರವು ಚುನಾವಣೆಯ ಹೊತ್ತಿನಲ್ಲೇ ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಇವುಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತಿದೆ. ಬಡವರ ಹಸಿವನ್ನು ನೀಗಿಸುವಂತಹ ಅನ್ನಭಾಗ್ಯ ಯೋಜನೆಗೆ ಮೊದಲು ಅಕ್ಕಿ ಕೊಡುವುದಾಗಿ ಹೇಳಿದ್ದ ಕೇಂದ್ರದ ಬಿಜೆಪಿ ಸಕಾರವು, ಇದೀಗ ಭರವಸೆಯಂತೆ ನಡೆದಿಕೊಳ್ಳುತ್ತಿಲ್ಲ. ಅಗತ್ಯ ಅಕ್ಕಿ ಪೂರೈಸುತ್ತಿಲ್ಲ, ಇದು ಅವರ ಸಣ್ಣತನವನ್ನು ತೋರಿಸುತ್ತದೆ ಅಷ್ಟೆ ಎಂದು ಪಾಟೀಲರು ಟೀಕಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು