Bengaluru 22°C
Ad

ಸಾರಿಗೆ ನಿಗಮದ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ವಿತರಣೆ

ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಸಾರಿಗೆ ನಿಗಮದಿಂದ ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಸಾರಿಗೆ ನಿಗಮದಿಂದ ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಿಗಮದ ಕೇಂದ್ರ ಕಛೇರಿಯಲ್ಲಿ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಿಗೆ ನಿಗಮದ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿರುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವೆಯಲ್ಲಿದ್ದ 17 ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1 ವಿಮೆ ಕೋಟಿ ನೀಡಲಾಗಿದ್ದು, ಹಾಗೂ ಮೃತಪಟ್ಟ 39 ನೌಕರರ ಅವಲಂಬಿತರಿಗೆ ಸಿಬ್ಬಂದಿಗಳ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಹಣ ನೀಡಲಾಗಿದೆ ಎಂದರು. ಶಕ್ತಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮುಖ್ಯ ಪಾತ್ರ ವಹಿಸಿರುವ ನಿಗಮದ ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಪಾತ್ರ ಅಭಿನಂದನೀಯ ಎಂದು ತಿಳಿಸಿದರು. ಈ ವೇಳೆ ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.

ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್ ಗುಬ್ಬಿ ಮಾತನಾಡಿ, ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿರುತ್ತದೆ. ಇಂದು ವಿತರಿಸಲಾಗಿರುವ ಪರಿಹಾರ ಮೊತ್ತವನ್ನು ಕುಟುಂಬ ವರ್ಗದವರು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಆರ್ಥಿಕ ಸ್ವಾವಲಂಬನೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶ ವಿ.ಅನ್ಬುಕುಮಾರ್, ಕಾರ್ಮಿಕ ಸಂಘಟನೆಗಳ ಮುಖಂಡರಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು ಇತರರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad