News Karnataka Kannada
Sunday, May 05 2024
ಬೆಂಗಳೂರು

ಬೆಂಗಳೂರು: ಮೊದಲ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್ ನಲ್ಲಿ ಭಿನ್ನಮತವಿಲ್ಲ- ಡಿ.ಕೆ.ಶಿವಕುಮಾರ್

Shivakumar: I took Bommai's advice on development issues
Photo Credit : Facebook

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ನಂತರ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ವಿಷಯಗಳನ್ನು ಅಂತಿಮಗೊಳಿಸಲಾಗಿದೆ. ಯಾವುದೇ ಬಿಕ್ಕಟ್ಟು ಉದ್ಭವಿಸಿದರೆ, ಅದನ್ನು ಪರಿಹರಿಸಲು ನಾವು ಕುಳಿತು ಚರ್ಚಿಸುತ್ತೇವೆ” ಎಂದು ಹೇಳಿದರು.

“ನನಗೆ ಎಲ್ಲಾ 224 ಕ್ಷೇತ್ರಗಳು, ಎಲ್ಲಾ ಆಕಾಂಕ್ಷಿಗಳು ಸಮಾನ.  ಆದರೆ, ಒಂದು ಸ್ಥಾನಕ್ಕೆ 10 ರಿಂದ 15 ಆಕಾಂಕ್ಷಿಗಳಿದ್ದರೆ, ಒಬ್ಬರಿಗೆ ಮಾತ್ರ ಟಿಕೆಟ್ ನೀಡಬಹುದು. ಅಂತಿಮವಾಗಿ ಕಾಂಗ್ರೆಸ್‌ ಹಿಡಿಯುವುದು ನಮ್ಮ ಜವಾಬ್ದಾರಿ ಎಂದರು.

ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಅವರು ಕೋಲಾರ ಕ್ಷೇತ್ರದಿಂದ ಟಿಕೆಟ್ ಕೇಳಿದ್ದರೆ ನಾವು ಅದನ್ನು ನೀಡುತ್ತಿದ್ದೆವು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು