ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಲ್ಯಾಂಡ್ ಆಗಿದೆ. ಬುಧವಾರ ಸಂಜೆ ನಿಗಧಿತ 6:04ರ ಸಮಯದಲ್ಲಿ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಇಳಿದಿದೆ. ಇದರಿಂದ ಭಾರತದಲ್ಲಿ ಸಂಭ್ರಮ ಮನೆ ಮಾಡಿದೆ.
ಇನ್ನು ಚಂದ್ರಯಾಣ 3 ಸಕ್ಸಸ್ ಆದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿ ಭೇಟಿ ನೀಡಿ ವಿಜ್ಞಾನಿಗಳ ತಂಡಕ್ಕೆ ಸನ್ಮಾನಿಸಿ ಅಭಿನಂದನೆ ತಿಳಿಸಿದ್ದಾರೆ.
ಇನ್ನು ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್ ನೀಡಲಿದ್ದಾರೆ.
ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ… pic.twitter.com/db82czaDpa
— DK Shivakumar (@DKShivakumar) August 23, 2023