ಬೆಂಗಳೂರು: ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಘೋಷಣೆ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ. ನಟರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿ ಆಗಿದ್ದಾರೆ.
ಸ್ಯಾಂಡಲ್ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ.
ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ #Lidkar ಸಂಸ್ಥೆಯ ಪ್ರಚಾರ ರಾಯಭಾರಿಯಾಗಲು ತುಂಬ ಹೆಮ್ಮೆಯಿದೆ. ಈ ತರಹದ ಒಳ್ಳೆ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ @LIDKAR_HoL ನ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಅವರಿಗು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗು ಸಮಾಜ ಕಲ್ಯಾಣ… pic.twitter.com/luLtP1hjDT
— Dhananjaya (@Dhananjayaka) December 6, 2023