News Karnataka Kannada
Sunday, May 12 2024
ಬೆಂಗಳೂರು

ಕಥೆ ಹಣೆಯುವುದು ಬೇಡ, ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಎಚ್‌. ಡಿ. ದೇವೆಗೌಡ

It will be difficult for India to succeed: Former PM HD Deve Gowda
Photo Credit : Facebook

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಎನ್‌ಡಿಎಯೊಂದಿಗೆ ಕೈಜೋಡಿಸಲಿದೆ ಎಂಬ ಮಾತು ದಟ್ಟವಾಗಿತ್ತು. ಅದಕ್ಕೆ ತಕ್ಕಂತೆ ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಅವರು ಸದನದ ಹೊರಗೆ ಮತ್ತು ಒಳಗೆ ಬಿಜೆಪಿಯೊಂದಿಗೆ ಪ್ರತಿಭಟನೆ ಸಹಿತ ಪ್ರತಿ ವಿಷಯಗಳಲ್ಲಿ ಸಖ್ಯ ಬೆಳೆಸಿದ್ದು, ಗುಸು ಗುಸು ಮಾತಿಗೆ ಗಟ್ಟಿ ನೆಲೆ ಒದಗಿಸಿತ್ತು. ಆದರೆ ಗುರುವಾರ ರಾತ್ರಿ ನಡೆದ ಹೈ ಲೆವೆಲ್‌ ಮೀಟಿಂಗ್‌ ನಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೆಗೌಡ ಯುಪಿಎ (ಇಂಡಿಯಾ), ಎನ್‌ ಡಿಎ ಯೊಂದಿಗೆ ಹೋಗದಿರಲು ನಿರ್ಧರಿಸಿದ್ದಾರೆ.

ಯಾವ ಮೈತ್ರಿಕೂಟದ ಜೊತೆ ಸೇರುವ ಪ್ರಶ್ನೆಯೇ ಇಲ್ಲ, ಕುಮಾರಸ್ವಾಮಿಯವರು ಮೊನ್ನೆ ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದರು. ಅದನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಸದನದಲ್ಲಿ ಹೋರಾಟ ಮಾಡಿದರು. ಸದನದಲ್ಲಿ ಬಿಜೆಪಿಗೆ ಸಂಖ್ಯಾಬಲ ಹೆಚ್ಚಿದೆ, ಅದನ್ನು ಕಡೆಗಣಿಸಲು ಸಾಧ್ಯವಿಲ್ಲ, ಬಿಜೆಪಿಯವರು ಕಲಾಪ ಬಹಿಷ್ಕರಿಸಿ ವಾಕ್ ಔಟ್ ಮಾಡಿದರು. ಆಗ ಕುಮಾರಸ್ವಾಮಿಯವರೂ ಅವರನ್ನು ಅನುಸರಿಸಿದರು. ಅದಕ್ಕೆ ಜೆಡಿಎಸ್-ಬಿಜೆಪಿ ಒಟ್ಟಾಗಿದೆ ಎಂದು ಕಥೆ ಹೆಣೆಯುವುದು, ಸಂಬಂಧ ಕಲ್ಪಿಸುವುದು ಬೇಡ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು