ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್, ಬುರುಡೆ ಕುಮಾರ್ ಎಂದು ಕಿಡಿಕಾರಿದರು.

ಈ ವೇಳೆ ಯುಪಿಎ ಮತ್ತು ಎನ್‌ಡಿಎ ಅವಧಿಯಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ದಾಖಲೆ ರಿಲೀಸ್‌ ಮಾಡಿ ವಾಗ್ದಾಳಿ ನಡೆಸಿದರು. ಕಳೆದ ಹತ್ತು ವರ್ಷಗಳ ಯುಪಿಎ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ.

ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

 

 

 

Chaitra Kulal

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

10 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

31 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

38 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

1 hour ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago