News Karnataka Kannada
Friday, May 17 2024
ಬೆಂಗಳೂರು

ಸೂರಜ್ ರೇವಣ್ಣ ವಿರುದ್ಧ ಚುನಾವಣಾ ತಕರಾರು ಅರ್ಜಿ ವಜಾ

Photo Credit : News Kannada

ಬೆಂಗಳೂರು: ಹಾಸನ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ದೇವರಾಜೇಗೌಡ ಮತ್ತು ಇತರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಸುದೀರ್ಘ ವಿಚಾರಣೆ ನಡೆಸಿ ಮೊಕದ್ದಮೆಯನ್ನು ಬುಧವಾರ ವಜಾಗೊಳಿಸಿದೆ.

ಸೂರಜ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಸುಳ್ಳು ದಾಖಲೆಯನ್ನು ನೀಡಿದ್ದು, ಇವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ವಕೀಲ ದೇವರಾಜೇಗೌಡ ಮತ್ತು ಇತರರು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಗಳ ಬಳಿ ನಾಮಪತ್ರದ ನಕಲನ್ನು ತೆಗೆದುಕೊಂಡು ಅದನ್ನು ಪರೀಕ್ಷಿಸಲಾಗಿದೆ. ಅದರಲ್ಲಿ ಸುಳ್ಳು ಅರ್ಜಿಯನ್ನು ನೀಡಿರುವುದು ಬಹಿರಂಗವಾಗಿದೆ. ಅವರು ನಾಮಪತ್ರ ಸಲ್ಲಿಸುವಾಗ ಗಂಭೀರ ವಿಷಯಗಳನ್ನು ಮುಚ್ಚಿಟ್ಟಿದ್ದಾರೆ. ಮದುವೆಯ ಬಗ್ಗೆ ಸತ್ಯವನ್ನು ಮುಚ್ಚಿಟ್ಟಿದ್ದಾರೆ ಎಂದು ದೇವರಾಜೇಗೌಡ ಆರೋಪಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಈ ಚುನಾವಣಾ ತಕಾರರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು