ಬೆಂಗಳೂರು: ನಗರದ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನಿನ್ನೆ (ನ.19) ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ.
ನಿರ್ಲಕ್ಷ್ಯದ ಆರೋಪದ ಮೇಲೆ ಬೆಸ್ಕಾಂ ಎಇ ಚೇತನ್, ಜೆಇ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜು ಸೇರಿದಂತೆ ಐವರನ್ನು ಕಾಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಆದ್ರೆ, ಇದೀಗ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಕಳೆದ ವರ್ಷ ಟ್ರಾನ್ಸ್ ಫಾರ್ಮರ್ ಸ್ಫೋಟಕ್ಕೆ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಧಗಧಗಿಸಿ ಹೊತ್ತಿ ಉರಿದಿದ್ದಳು. ಈ ಘೋರ ಘಟನೆ ಬೆಸ್ಕಾಂ ಹೊಣೆಗೇಡಿತನವನ್ನು ಬಯಲುಮಾಡಿತ್ತು. ಇದೀಗ ಮತ್ತೊಂದು ಭೀಕರ ದುರಂತವೇ ನಡೆದುಹೋಗಿದೆ.