ಬೆಂಗಳೂರು: ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.
ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಮೃತಪಟ್ಟವರು.
ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್ಗೆ ಬೈಕ್ ನಲ್ಲಿ ಬರುತಿದ್ದ ಯುವತಿ, ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಶುಕ್ರವಾರ ಸಹ ಎಂದಿನಂತೆಯೇ, ಮಲ್ಲೇಶ್ವರದಿಂದ ಹೊರಟಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.
ಬಳಿಕ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.