ಬೆಂಗಳೂರು: ಆ್ಯಪಲ್ ಏರ್ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಹೆಸರಿನಲ್ಲಿ ಬರೆದಿದ್ದ ನಕಲಿ ಪತ್ರ ವೈರಲ್ ಆಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಳಂದ ಶಾಸಕ ಬಿಆರ್ ಪಾಟೀಲ್ ಅವರ ಲೆಟರ್ಹೆಡ್ ಬಳಸಿ ಪತ್ರ ಬರೆದು ವೈರಲ್ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಶಾಸಕ ಬಿಆರ್ ಪಾಟೀಲ್, ನನ್ನ ಹಳೆಯ ಲೆಟರ್ಹೆಡ್ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.