ಬೆಂಗಳೂರು: ಲೋಕಸಭಾ ಚುನಾವಣೆ ಶುರುವಾಗುತ್ತಿದ್ದಂತೆ ಒಂದಲ್ಲಾ ಒಂದು ರೀತಿಯ ಘಟನೆಗಳು ನಡೆಯುತ್ತಲೆ ಇವೆ. ಇದೀಗ ಸಿಎಂ ಸಿದ್ದರಾಮಯ್ಯ ಹೇಳಿರುವಂತೆ ನಕಲಿ ಪೋಸ್ಟ್ ವೈರಲ್ ಆಗಿದೆ. ಈ ಸಂಬಂಧ 7 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಹಿಂದುಗಳ ವೋಟ್ ಅವಶ್ಯಕತೆ ಇಲ್ಲ ನಮಗೆ ಮುಸ್ಲಿಮರ ಓಟು ಸಾಕು ಎಂದು ನಕಲಿ ಪೋಸ್ಟ್ ವೈರಲ್ ಆಗಿದ್ದು ಅದನ್ನು ಪತ್ರಿಕೆಯಲ್ಲಿ ವರದಿ ಬಂದಂತೆ ಕ್ರಿಯೇಟ್ ಮಾಡಿ ಪೋಸ್ಟ್ ಮಾಡಿದ್ದಾರೆ.ಇದನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಬಿಂಬಿಸುವ ರೀತಿಯಲ್ಲಿ ಕ್ರೀಯೇಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.ಇದೀಗ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಅವರಿಂದ ದೂರು ನೀಡಲಾಗಿದೆ.