News Karnataka Kannada
Saturday, April 27 2024
ಬೆಂಗಳೂರು

ಒಂದು ಸುತ್ತಿನ ಮಾತುಕತೆ ಪೂರ್ಣಗೊಳಿಸಿ, ಕೈ ಸೇರ್ಪಡೆಗೆ ಸಜ್ಜಾದ ಸವದಿ

farmer-minisiter-laxman-savadi-to-join-congress
Photo Credit : News Kannada

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ನಡೆಸುತ್ತಿದ್ದು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಬಿಜೆಪಿ ಹಿರಿಯ ಮುಖಂಡ ಲಕ್ಷ್ಮಣ ಸವದಿ ಟಿಕೇಟ್‌ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದ್ದು, ಟಿಕೆಟ್ ಗಾಗಿ ಬಿಜೆಪಿ ಹಿರಿಯ ಮುಖಂಡ ಲಕ್ಷ್ಮಣ ಸವದಿ ಹಾಗೂ ಮಹೇಶ ಕುಮಟಳ್ಳಿ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಮಹೇಶ್ ಕುಮಟಳ್ಳಿ ಪರ ರಮೇಶ್ ಜಾರಕಿಹೊಳಿ ಬ್ಯಾಟ್ ಬೀಸುತ್ತಿದ್ದಾರೆ. ಹೀಗಾಗಿ ಟಿಕೆಟ್ ಕೈ ತಪ್ಪಿದರೆ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಯತ್ನ ನಡೆದಿದೆ ಎನ್ನಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮುಸುಕಿನ ಗುದ್ದಾಟದಂತಿದ್ದ ಈ ಫೈಟ್‌ ಪ್ರಸ್ತುತ ಮಾತು ಪ್ರತಿ ಮಾತಿಗೆ ಕಾರಣವಾಗಿದೆ. ಅಲ್ಲದೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೈ ಮೇಲಾಗುವ ಸಾಧ್ಯತೆ ಅಧಿಕವಾಗಿದೆ. ಈ ನಿಟ್ಟಿನಲ್ಲಿ ತಮಗೆ ಟಿಕೇಟ್‌ ಸಿಗುವುದಿಲ್ಲ ಎಂದು ಖಾತ್ರಿಯಾದ ಬಳಿಕ ಸವದಿ ಕಾಂಗ್ರೆಸ್‌ ಕದತಟ್ಟುವ ಯತ್ನದಲ್ಲಿದ್ದಾರೆ.

ಮಾತುಕತೆ: ಕಾಂಗ್ರೆಸ್ ನ ಹಿರಿಯ ನಾಯಕರು ಲಕ್ಷ್ಮಣ ಸವದಿ ಅವರ ಸಂಪರ್ಕದಲ್ಲಿದ್ದು, ಕೊಪ್ಪಳ ಮೂಲದ ಶಾಸಕರ ಜತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಾಯುತ್ತಿರುವ ಲಕ್ಷ್ಮಣ ಸವದಿ ಟಿಕೆಟ್ ಸಿಕ್ಕದಿದ್ದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು