ಬೆಂಗಳೂರು: ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಭಾರಿ ದುರಂತವೊಂದು ಸಂಭವಿಸಿತ್ತು. ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿತ್ತು.
ಈ ವೇಳೆ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮಗು-ತಂದೆಯನ್ನು ಮೊದಲು ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರೂ ಪ್ರಾಣಬಿಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.