ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ ಪಟ್ಟಿ ರೆಡಿ: ಡಿಸಿಎಂ

ಬೆಂಗಳೂರು: ನಿಗಮ ಮಂಡಳಿ ಆಯ್ಕೆ ಕೈ ಹೈಕಮಾಂಡ್‌ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ತಡರಾತ್ರಿವರೆಗೂ ಕೈ ಹೈ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರೊಂದಿಗೆ ಚರ್ಚೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ ಹೇಳಿಕೆ ನೀಡಿದ್ದಾರೆ.

ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ಕೂಡ ಅವರು(ಸುರ್ಜೇವಾಲಾ) ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಕೆಲವು ನಾಯಕರು ಸಹ ಅವರೊಂದಿಗೆ ಮಾತನಾಡುತ್ತಿದ್ದಾರೆ. ನಾವು ಕೆಲವು ಹಿರಿಯ ನಾಯಕರು ಮತ್ತು ಶಾಸಕರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರು ನವೆಂಬರ್ 28 ರಂದು ಮತ್ತೆ ಬರುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ (ಸಿದ್ದರಾಮಯ್ಯ) ಮತ್ತು ನಾನು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರು ಹೇಳಿದ್ದಾರೆ.

ಚುನಾವಣಾ ಪ್ರಚಾರ ಮುಗಿಸಿ ಸುರ್ಜೇವಾಲಾ ಅವರು ನ.28ರಂದು ನಗರಕ್ಕೆ ವಾಪಸಾಗಲಿದ್ದು, ಬಳಿಕ ಪಟ್ಟಿಯನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಲಾಗುವುದು ಎಂದು ಶಿವಕುಮಾರ ತಿಳಿಸಿದ್ದಾರೆ.

Ashika S

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

6 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

16 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

27 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

46 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

56 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago