ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ.
ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಝ್ ಹೋಟೆಲ್ನಲ್ಲಿ ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬುವರಿಗೆ ಹಲ್ಲೆ ಮಾಡಿದ ಆರೋಪದ ಜೊತೆಗೆ ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಅವರಿಗೆ ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಆರೋಪ ಕೇಳಿಬಂದಿತ್ತು.
ಈ ಘಟನೆಗೆ ಸಂಬಂಧಪಟ್ಟಂತೆ ಶ್ರೀನಿವಾಸ್ ನಾಯ್ಡು ವಿರುದ್ಧವೇ ಪ್ರಕರಣ ದಾಖಲಾಗಿತ್ತು. ಇನ್ನು ಮೇ 26 2023 ರಂದು ಈ ಗಲಾಟೆ ನಡೆದಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಾಗಿದೆ.