ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸೈಬರ್ ಕ್ರೈಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಆರೋಪಿಯನ್ನು ಈಶ್ವರಪ್ಪ ಮುನಿಯಪ್ಪ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಆರೋಪಿ ಈಶ್ವರಪ್ಪ, ಮಮತಾ ಮತ್ತು ಸಿದ್ದರಾಮಯ್ಯ ವಿರುದ್ಧವಾಗಿ ಜಾಲತಾಣಗಳಲ್ಲಿ ಸರಣಿ ಪೋಸ್ಟ್ಗಳನ್ನು ಮಾಡಿದ್ದ. ಉಪಮುಖ್ಯಮಂತ್ರಿ ಡಿಕೆಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ವಿರುದ್ಧವೂ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವೈಟ್ಫೀಲ್ಡ್ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸ್ ಠಾಣೆ ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿಕೊಂಡು ಹುಡುಕಾಟ ನಡೆಸಿದ್ದಾರೆ.