ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳನ್ನು ಹೊರಗೆ ತರುವ ಕೆಲಸ ಮಾಡಲಾಗುವುದು ಎಂದು ಈ ಹಿಂದೆ ಸಚಿವ ಎಂ. ಬಿ. ಪಾಟೀಲ್ ಹೇಳಿಕೆ ನೀಡಿದ್ದರು.
ಅದರಂತೆ ಈ ಕುರಿತು ಮೊದಲ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗಂಗಾಕಲ್ಯಾಣ ಯೋಜನೆ ಅಕ್ರಮ ಸಂಬಂಧ ಮೊದಲ ಎಫ್ಐಆರ್. ಯೋಜನೆಯಲ್ಲಿ ಕೋಟ್ಯಂತರ ರೂ. ವಂಚನೆಯಾಗಿದೆ ಎಂದು ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿಎಫ್ಐಆರ್ ದಾಖಲಿಸಲಾಗಿದೆ.