News Karnataka Kannada
Wednesday, May 01 2024
ಬೆಂಗಳೂರು

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಭರ್ಜರಿ ಮಳೆ: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆಯೂ ಹರ್ಷ ತಂದಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಗುರುವಾರ ವರ್ಷದ ಮೊದಲ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದೇ ಗಂಟೆ ಕಾಲ ಸುರಿದ ಮಳೆಗೆ ಹಳ್ಳಿಗರು, ಬೆಳೆಗಾರರು ಸಂತಸಗೊಂಡಿದ್ದಾರೆ.
Photo Credit : News Kannada

ಬೆಂಗಳೂರು: ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆಯೂ ಹರ್ಷ ತಂದಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಗುರುವಾರ ವರ್ಷದ ಮೊದಲ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದೇ ಗಂಟೆ ಕಾಲ ಸುರಿದ ಮಳೆಗೆ ಹಳ್ಳಿಗರು, ಬೆಳೆಗಾರರು ಸಂತಸಗೊಂಡಿದ್ದಾರೆ.

ಕೊಡಗಿನ ವಿರಾಜಪೇಟೆ ತಾಲೂಕಿನ ಕಾಕೋಟುಪರಂಬುನಲ್ಲಿ 3.5 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಮುತ್ತೋಡಿ ತಪ್ಪಲಿನ ಜಾಗರ ಹೋಬಳಿಯ ಕೊಳಗಾವೆ ಜತೆಗೆ ಮೇಲಿನಹುಲುವತ್ತಿ ಭಾಗದ ಸುತ್ತಮುತ್ತ 38.5 ಮಿ.ಮೀ ಮಳೆ ಸುರಿದಿದೆ.

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಮತ್ತು ಮಲೆನಾಡಿನ ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡಿನ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನವು ದುಪ್ಪಟ್ಟಾಗಲಿದೆ. ಶಾಖದ ತರಂಗ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು