News Karnataka Kannada
Friday, May 10 2024
ಬೆಂಗಳೂರು

16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ: ರಾಜ್ಯಪಾಲರಿಂದ ಭಾಷಣ

Assembly begins
Photo Credit : Twitter

ಬೆಂಗಳೂರು: ಇಂದಿನಿಂದ (ಜು.02) 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾತನಾಡಿದರು. ಇದೇ ವೇಳೆ ಮಾತನಾಡಿದ ಅವರು, ಕುವೆಂಪು ಸೇರಿದಂತೆ ನಾಡಿನ ನಾನಾ ಕವಿಗಳ ಆಶಯವನ್ನು ತಿಳಿಸಿದರು. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸರ್ಕಾರವನ್ನು ನಡೆಸಲಾಗುವುದು. ಸರ್ಕಾರ ರಾಜ್ಯದ ಸರ್ವೋತ್ತಮ ಅಭಿವೃದ್ದಿಗೆ ಬದ್ದವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸಲಾಗುವುದು ಅಂತ ತಿಳಿಸಿದರು.

ಅನ್ನದಾತನದ ಯೋಜನೆ ಮೂಲಕ ಎಲ್ಲರಿಗೂ 5 ಕೆಜಿ ಅಕ್ಕಿಯನ್ನು ನೀಡಲಾಗುವುದು. ಈ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ಮಾಡಲಾಗುವುದು. ನಿರುದ್ಯೋಗಿ ಪದವಿಧರರಿಗೆ ಯುವನಿಧಿ ಯೋಜನೆ ಅಡಿಯಲ್ಲಿ 3 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ನೀಡಲಾಗುತ್ತದೆ. ಈ ಯೋಜನಯಿಂದ ಸುಮಾರು 2.14 ಕೋಟಿ ಕುಟುಂಬಕ್ಕೆ ಅನುಕೂಲ ಆಗಲಿದೆ. ಡಿಪ್ಲೋಮಾದರಾರಿಗೆ 1500 ನೀಡಲಾಗುತ್ತದೆ.

ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತದೆ. ಸರ್ಕಾರ ಬಡವರು, ಆರ್ಥಿಕವಾಗಿ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂಬುದಾಗಿ ಹೇಳಿಸಿ, ರಾಜ್ಯಪಾಲರ ಭಾಷಣ ಬಿಜೆಪಿಯನ್ನು ತಿವಿಯುವಂತೆ ಕಾಂಗ್ರೆಸ್ ಮಾಡಿದೆ ಎನ್ನಲಾಗುತ್ತಿದೆ.

ಇನ್ನು  ಜುಲೈ 7ಕ್ಕೆ 14ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸಲಿದ್ದಾರೆ.  ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ​​ ಚರ್ಚೆ ನಡೆಯುವ ಸಾಧ್ಯತೆ ಇದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು