News Karnataka Kannada
Sunday, May 12 2024
ಬೆಂಗಳೂರು

ಕೇಶವ ಕೃಪಾಕ್ಕೆ ಬೊಮ್ಮಾಯಿ ಭೇಟಿ: ಬಿಜೆಪಿ ರಾಜ್ಯಧ್ಯಕ್ಷರ ಬದಲಾವಣೆಗೆ ಆರ್‌ಎಸ್‌ಎಸ್‌ ಸೂತ್ರ

Former CM Bommai's visit to Keshav Kripa: RSS formula for change of BJP state president
Photo Credit : News Kannada

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯವಾಗಿ ಸೋತಿದೆ. ಘಟಾನುಘಟಿ ನಾಯಕರೆಲ್ಲ ಸೋತು ಸುಣ್ಣವಾಗಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ನೇತೃತ್ವದ ವಹಿಸಿರುವವರನ್ನು ಬದಲಾಯಿಸುವಂತೆ ಆರ್‌ಎಸ್‌ಎಸ್‌ ಸೂಚಿಸಿದೆ.

ಈ ನಿಟ್ಟಿನಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕೃಪಾಕ್ಕೆ ಮಾಜಿ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಮಾರ್ಗದರ್ಶನ ದೊರೆತಿದೆ. ನಮ್ಮ ರಾಜ್ಯಾಧ್ಯಕ್ಷರು ವರಿಷ್ಠರ ಜತೆ ಚರ್ಚೆ ಮಾಡಿ ಪಕ್ಷ ಸಂಘಟನೆ ಬಗ್ಗೆ ನಿರ್ಧರಿಸುತ್ತಾರೆ. ಶಾಸಕಾಂಗ ಪಕ್ಷದ ಬಗ್ಗೆ ಇಂದು ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ರಾಜ್ಯಾಧ್ಯಕ್ಷ ನಳಿನ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಾಲತಾಣಗಳಲ್ಲಿ ಟ್ರೋಲ್‌ಗಳ ಮೇಲೆ ಟ್ರೋಲ್‌ ಹರಿಬಿಡಲಾಗುತ್ತಿದೆ. ವೀರಶೈವ, ಲಿಂಗಾಯತ ಸಮುದಾಯದ ಆಶೋತ್ತರ ಈಡೇರಿಸದ ಬಗ್ಗೆಯೂ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಕುರಿತು ಪಕ್ಷದೊಳಗೆ ಮತ್ತು ಬಿಜೆಪಿ ಮತದಾರರ ನಡುವೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಮಾತುಕತೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು