ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯವಾಗಿ ಸೋತಿದೆ. ಘಟಾನುಘಟಿ ನಾಯಕರೆಲ್ಲ ಸೋತು ಸುಣ್ಣವಾಗಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ನೇತೃತ್ವದ ವಹಿಸಿರುವವರನ್ನು ಬದಲಾಯಿಸುವಂತೆ ಆರ್ಎಸ್ಎಸ್ ಸೂಚಿಸಿದೆ.
ಈ ನಿಟ್ಟಿನಲ್ಲಿ ಆರ್ಎಸ್ಎಸ್ ಕಚೇರಿ ಕೇಶವ ಕೃಪಾಕ್ಕೆ ಮಾಜಿ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಮಾರ್ಗದರ್ಶನ ದೊರೆತಿದೆ. ನಮ್ಮ ರಾಜ್ಯಾಧ್ಯಕ್ಷರು ವರಿಷ್ಠರ ಜತೆ ಚರ್ಚೆ ಮಾಡಿ ಪಕ್ಷ ಸಂಘಟನೆ ಬಗ್ಗೆ ನಿರ್ಧರಿಸುತ್ತಾರೆ. ಶಾಸಕಾಂಗ ಪಕ್ಷದ ಬಗ್ಗೆ ಇಂದು ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಾಲತಾಣಗಳಲ್ಲಿ ಟ್ರೋಲ್ಗಳ ಮೇಲೆ ಟ್ರೋಲ್ ಹರಿಬಿಡಲಾಗುತ್ತಿದೆ. ವೀರಶೈವ, ಲಿಂಗಾಯತ ಸಮುದಾಯದ ಆಶೋತ್ತರ ಈಡೇರಿಸದ ಬಗ್ಗೆಯೂ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕುರಿತು ಪಕ್ಷದೊಳಗೆ ಮತ್ತು ಬಿಜೆಪಿ ಮತದಾರರ ನಡುವೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಮಾತುಕತೆ ನಡೆದಿದೆ.