ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಬಾವ, ಎಸ್ಟೇಟ್ ಉದ್ಯಮಿ ನಾಪತ್ತೆಯಾಗಿದ್ದಾರೆ. ಶುಕ್ರವಾರ ರಾತ್ರಿ ತೋಟದ ಮನೆಯಲ್ಲಿ ಇದ್ದವರು ನಾಪತ್ತೆಯಾಗಿರುವುದರಿಂದ ಅವರಿಗಾಗಿ ಶೋಧ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದಾರೆ.
ಮಹದೇವಯ್ಯ (62) ನಾಪತ್ತೆಯಾಗಿರುವ ವ್ಯಕ್ತಿ. ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದಲ್ಲಿ ವಾಸವಾಗಿದ್ದರು. ಮಹದೇಶ್ವರ ಬೆಟ್ಟದಲ್ಲಿ ಟವರ್ ಲೊಕೇಶನ್ ಟ್ರೇಸ್ ಆಗಿದ್ದು, ಇತ್ತ ಮನೆಯಲ್ಲಿ ಬೀರು ಓಪನ್ ಆಗಿದ್ದು, ಬೆಡ್ ರೂಮ್ನಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ. ಬೆಳಗ್ಗೆಯಿಂದ ಮಹದೇವಯ್ಯ ಫೋನ್ ಸ್ವಿಚ್ ಆಫ್ ಆಗಿದ್ದು, ಕಾರು ಕೂಡಾ ನಾಪತ್ತೆಯಾಗಿದೆ.