ದಿವ್ಯಾಂಗರಿಗೆ ಉಚಿತ ಅಂಗಾಂಗ ಜೋಡಣೆ ಶಿಬಿರ

ಬೆಂಗಳೂರು: ಉದಯ್‌ ಪುರದ ದಿವ್ಯಾಂಗರ ರಾಷ್ಟ್ರಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನ್‌ ನಿಂದ ಬೆಂಗಳೂರಿನಲ್ಲಿ ದಕ್ಷಿಣ ರಾಜ್ಯಗಳಿಂದ ಆಗಮಿಸಿದ್ದ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಚಾಲನೆ ನೀಡಿದರು.

ಬೆಂಗಳೂರಿನ ವಿವಿಪುರದ ಅರಸೋಜಿ ರಾವ್‌ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕೇರಳ ಆಂಧ್ರಪ್ರದೇಶದಿಂದ ಬಂದಿದ್ದ ದಿವ್ಯಾಂಗರಿಗೆ ಅಗತ್ಯಕ್ಕೆ ತಕ್ಕಂತೆ ಅಂಗಾಂಗಗಳ ಅಳತೆ ತೆಗೆದುಕೊಳ್ಳಲಾಯಿತು. ಅನುಭವಿ ಮೂಳೆ ತಜ್ಞರು, ಪ್ರಾಸ್ತೆಟಿಕ್ ಪರಿಣಿತ ವೈದ್ಯರು ಅಳತೆ ತೆಗೆದುಕೊಂಡರು. ದಿವ್ಯಾಂಗರ ಬದುಕಿನಲ್ಲಿ ಇದು ಹೊಸ ಆಶಾಕಿರಣ ಮೂಡಿಸುವ ಮತ್ತು ಸ್ವಾವಲಂಬಿ ಬದುಕು ಸಾಗಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಚಿವರು ಪರಿಣಿತ ವೈದ್ಯರಿಂದ ಮಾಹಿತಿ ಪಡೆದರು.

ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ಬಿ. ನಾಗೇಂದ್ರ, ಜೀವನದಲ್ಲಿ ನಿರೀಕ್ಷೆ ಇಲ್ಲದೇ ಸಂಭವಿಸುವ ಅವಘಡದಲ್ಲಿ ಅಮೂಲ್ಯ ಅಂಗಾಂಗಳನ್ನು ಕಳೆದುಕೊಂಡು ಕಷ್ಟದಲ್ಲಿರುವವರಿಗೆ ಸರ್ಕಾರದ ಅರೋಗ್ಯ ಯೋಜನೆಗಳು ಸಹಕಾರಿಯಾಗಿವೆ. ಇದರ ಜೊತೆಗೆ ಇಂತಹ ಸೇವಾ ಸಂಸ್ಥೆಗಳ ಸಮಾಜ ಮುಖಿ ಸೇವೆಯಿಂದ ಆರ್ಥಿಕ ಹೊರೆ ಕಡಿಮೆಯಾಗಿದೆ. ನಾರಾಯಣ ಸೇವಾ ಸಂಸ್ಥೆ 38 ವರ್ಷಗಳಿಂದ 4.33 ಲಕ್ಷಕ್ಕೂ ಹೆಚ್ಚು ದಿವ್ಯಾಂಗರಿಗೆ ಶಸ್ತ್ರಚಿಕಿತ್ಸೆ ಮಾಡಿರುವುದು ಸಂಸ್ಥೆಯ ಅನುಪನ ಸೇವೆಗೆ ಸಾಕ್ಷಿಯಾಗಿದೆ. 38,200 ಅಂಗವಿಕಲ ಮಕ್ಕಳಿಗೆ, ಪುರುಷರು, ಮಹಿಳೆಯರಿಗೆ ಉಚಿತವಾಗಿ ಕೃತಕ ಅಂಗಾಗ ಜೋಡಣೆ ಮಾಡಿದ್ದು, ಈ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು ಆಶಿಸಿದರು.

ಬಳ್ಳಾರಿ ಜಿಲ್ಲೆಯಿಂದ ಸಾಧ್ಯವಾದ ಎಲ್ಲಾ ನೆರವು ನೀಡುತ್ತೇವೆ. ನಮ್ಮ ಜಿಲ್ಲೆಯ ಕಂಪೆನಿಗಳು, ಕರ್ನಾಟಕಗಳಿಂದಲೂ ನೆರವು ನೀಡುತ್ತೇವೆ. ಸಂಸ್ಥೆಯ ಮುಖ್ಯಸ್ಥರಾದ ಕೈಶಾಲ್‌ ಮಾನವ್‌ ಜೀವಂತ ದೇವರು. ಇಂತಹ ಉದಾತ್ತ ಸಂಸ್ಥೆಗೆ ನಿವೇಶನ ಕೊಡಿಸಲು ಎಲ್ಲಾ ರೀತಿಯ ಪ್ರಯತ್ನಿಸುತ್ತೇನೆ. ಸ್ವತಃ ತಮ್ಮ ಕಚೇರಿಯಲ್ಲೂ ಸಹ 8 ರಿಂದ 9 ಮಂದಿ ದಿವ್ಯಾಂಗರು ಕೆಲಸ ಮಾಡುತ್ತಿದ್ದಾರೆ. ಶನಿವಾರವಷ್ಟೇ ಬಳ್ಳಾರಿಯಲ್ಲಿ ನಾಲ್ಕು ಮಂದಿಗೆ ದಿವ್ಯಾಂಗರಿಗೆ ಕೆಲಸ ಕೊಡಿಸಿದ್ದೇನೆ. ತಮ್ಮ ಉಸಿರು ಇರುವ ತನಕ ದಿವ್ಯಾಂಗರ ಸೇವೆ ಮಾಡುತ್ತೇನೆ. ಕ್ರೀಡಾ ಮತ್ತು ಯುವ ಸಚಿವಾಲಯದಿಂದಲೂ ಇಂತಹ ಮಾನವೀಯ ಸೇವೆಗೆ ಸೂಕ್ತ ನೆರವು ನೀಡಲು ಸಿದ್ಧ ಎಂದರು.

ಕಾರ್ಯಕ್ರಮದಲ್ಲಿ ಜನರಲ್‌ ಮೋಟಾರ್ಸ್‌ ಕಂಪೆನಿಯ ಮುಖ್ಯಸ್ಥ ಅಮಿತ್‌ ಭಾತ್‌ ಪಟೇಲ್‌, ಉದ್ಯಮಿ ಗಣಪತ್‌ ಬಾಗ್ಲೇಚಾ, ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಭಗವಾನ್‌ ಪ್ರಸಾದ್‌ ಗೌರ್‌, ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಭಗವಾನ್‌ ಪ್ರಸಾದ್‌ ಗೌರ್‌, ಶಿಬಿರದ ಸಮನ್ವಯಕಾರ ರೋಹಿತ್‌ ತಿವಾರಿ, ಮಾಧ್ಯಮ ಸಮನ್ವಯಕಾರರಾದ ಬಿ.ವಿ ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

56 seconds ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 min ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

14 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

17 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

39 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

55 mins ago