ಅಜ್ಜಿ, ಮೊಮ್ಮಗಳಿಗೆ ಉಚಿತ ಟಿಕೆಟ್‌, ಲವ್‌ ಬರ್ಡ್ಸ್‌ ಗೆ 444 ರೂ. ಟಿಕೆಟ್‌!

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಅಜ್ಜಿ ಮತ್ತು ಮೊಮ್ಮಗಳಿಗೆ ‘ಶಕ್ತಿ ಯೋಜನೆ’ಯಡಿ ಫ್ರೀ ಬಸ್‌ ಪ್ರಯಾಣ ಟಿಕೆಟ್‌ ಸಿಕ್ಕಿದ್ದು, ಅವರ ಜೊತೆಯಲ್ಲಿ ತಂದಿದ್ದ ಲವ್‌ ಬರ್ಡ್ಸ್‌ಗಳಿಗೆ ಬರೋಬ್ಬರಿ 444 ರೂ.ಪ್ರಯಾಣ ಶುಲ್ಕ ವಿಧಿಸಿದ ಘಟನೆ ಇಂದು ಬೆಳಗ್ಗೆ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಅಜ್ಜಿ ಮತ್ತು ಮೊಮ್ಮಗಳು ಮೈಸೂರು ಕಡೆಗೆ ಬಸ್‌ನಲ್ಲಿ ಉಚಿತ ಪ್ರಯಾಣ ಬೆಳೆಸಿದ್ದು, ಅವರ ಜೊತೆಯಲ್ಲಿ ಪಂಜರದ ಲವ್‌ ಬರ್ಡ್ಸ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಅಜ್ಜಿ-ಮೊಮ್ಮಗಳಿಗೆ ಕಂಡಕ್ಟರ್‌ ಫ್ರೀ ಟಿಕೆಟ್‌ ಕೊಟ್ಟರು. ಆದರೆ ಲವ್‌ ಬರ್ಡ್ಸ್‌ಗಳಿಗೆ ಪ್ರಯಾಣ ಶುಲ್ಕ ಹಾಕಿದ್ದು, ನಾಲ್ಕು ಮಕ್ಕಳು ಎಂದು ಟಿಕೆಟ್‌ನಲ್ಲಿ ನಮೂದು ಮಾಡಿದ್ದಾರೆ. ಒಂದು ಬರ್ಡ್‌ ಪ್ರಯಾಣ ವೆಚ್ಚವಾಗಿ 111 ರೂ. ಬಿದ್ದಿದೆ. ಒಟ್ಟು ನಾಲ್ಕು ಹಕ್ಕಿಗಳಿಗೆ 444 ರೂಪಾಯಿ ಟಿಕೆಟ್ ನೀಡಲಾಗಿದೆ.

 

Chaitra Kulal

Recent Posts

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

4 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

14 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

24 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

24 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

37 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

1 hour ago