ಬೆಂಗಳೂರು: ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೆ ಪಟ್ಟಿ ಬಿಡುಗಡೆ ಮಾಡಿದ್ದು, ದಾವಣಗೆರೆಯಿಂದ ಸಂಸದ ಜಿ.ಎಂ ಸಿದ್ದೇಶ್ವರ್ ಪತ್ನಿ ಗಾಯತ್ರಿಯವರನ್ನು ಕಣಕ್ಕಿಳಿಸಲಾಗಿದೆ.
ಇದಕ್ಕೆ ಸಂತಸ ವ್ಯಕ್ತಪಡಿಸಿದ ಸಿದ್ದೇಶ್ವರ್, ಆರೋಗ್ಯ ಸಮಸ್ಯೆಗಳಿಂದಾಗಿ ನನಗೆ ಸ್ಪರ್ಧಿಸಲಾಗದ ಕಾರಣ ನನ್ನ ಕುಟುಂಬದವರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದೆ ಎಂದಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದೇಶ್ವರ್, ನನ್ನ ಪತ್ನಿಯ ಟಿಕೆಟ್ನಿಂದ ಇಡೀ ಜಿಲ್ಲೆಗೆ ಖುಷಿಯಾಗಿದೆ ಎಂದರು. ಜೊತೆಗೆ ಎಂ.ಪಿ ರೇಣುಕಾಚಾರ್ಯ ತಮ್ಮ ಪತ್ನಿಗೆ ಸಹಕಾರ ಕೊಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.