News Karnataka Kannada
Friday, May 03 2024
ಬೆಂಗಳೂರು

ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

Good news for priests from state government
Photo Credit : News Kannada

ಬೆಂಗಳೂರು: ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು ನೀಡಿದೆ.

ಅರ್ಚರು ಬಹು ವರ್ಷಗಳಿಂದ ಇದರೊಂದು ಬೇಡಿಕೆಯನ್ನು ಸರ್ಕಾರ ಮುಂದಿಡುತ್ತಾ ಬಂದಿದ್ದರು. ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಮುಂದಿಡುತ್ತಿದ್ದರು. ಸದ್ಯ ಅರ್ಚಕರ ಮನವಿಗೆ ಸ್ಪಂಧಿಸುವ ರಾಜ್ಯ ಸರ್ಕಾರ, ಅರ್ಚರಕರ ಬೇಡಿಕೆ ಗ್ರೀನ್ ಸಿಗ್ನಲ್ ನೀಡಿದೆ.

ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಹಕ್ಕು ಹಸ್ತಾಂತರ ಮಾಡುವ ಅವಕಾಶ ನೀಡಲಾಗಿತ್ತು. ಆದರೆ ಸದ್ಯಕ್ಕೆ ನಿಯಮಕ್ಕೆ ಬದಲಾವಣೆ ತಂದಿರುವ ಸರ್ಕಾರ, ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರಕ್ಕೆ ಅನುಮತಿಯನ್ನು ನೀಡಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಹೊಸ ಆದೇಶದ ಅನ್ವಯ ಅನಾರೋಗ್ಯ ಪೀಡಿತ ಅರ್ಚಕರಿಂದ ಅನುವಂಶಿಗಳಿಗೆ ಹಕ್ಕು ಹಸ್ತಾಂತರ ಮಾಡಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು