ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು. ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು.
ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು. ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಓಲಿಂಪಿಕ್ಸ್ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ ಎಂದು ಶುಭ ಹಾರೈಸಿದರು.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳು ಹಾಗೂ ತರಬೇತುದಾರರನ್ನು ಮುಖ್ಯಮಂತ್ರಿ @siddaramaiah ಅವರು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಮತ್ತು ನಸೀರ್… pic.twitter.com/xLyyKRsTM5— CM of Karnataka (@CMofKarnataka) October 18, 2023