ಬೆಂಗಳೂರು: ರಾಜ್ಯ ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆ ರಾಜ್ಯದೊಳಗೆ ಸಂಚರಿಸುವ 22 ಪ್ರಮುಖ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಜನರಲ್ ಬೋಗಿ ಸೇರ್ಪಡೆಗೊಳಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
ಇತ್ತೀಚೆಗೆ ಪೊಲೀಸ್ ಪರೀಕ್ಷೆ ಸಂದರ್ಭದಲ್ಲಿ ರೈಲುಗಳಲ್ಲಿ ಉಂಟಾಗುತ್ತಿರುವ ಪ್ರಯಾಣಿಕ ದಟ್ಟಣೆ ನಿಯಂತ್ರಿಸಲು, ಫೆ.23 ರಿಂದ ಫೆ.26ರ ವರೆಗೂ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಮೈಸೂರು ವಿಭಾಗದ ದೇವರಗುಡ್ಡ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವೆ ಅಗತ್ಯ ಸುರಕ್ಷತಾ ಸಂಬಂಧಿತ ನಿರ್ವಹಣಾ ಕಾಮಗಾರಿಯ ಸಲುವಾಗಿ, 2 ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತಿದೆ. ಫೆ.22ರಂದು 16541 ಯಶವಂತಪುರ&ಪಂಢರಪುರ(16541) ರೈಲು 60 ನಿಮಿಷ, ಫೆ.20 ರಿಂದ ಫೆ.28 ವರೆಗೆ ಮೈಸೂರು&ಪಂಢರಪುರ (16535) ಎಕ್ಸ್ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತದೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…
ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…
ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.