ಬೆಂಗಳೂರು: ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ಬರುವ ಮಠ, ಮದರಸ, ಚರ್ಚ್ಗಳು ನೋಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುದಕ್ಕೆ ಇದೀಗ ಸರಕಾರ ಶಾಕಿಂಗ್ ನೋಟಿಸ್ ಕೊಟ್ಟಿದೆ. ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್, ಮಠ, ಎನ್ಜಿಓಗಳಿಗೂ ನೋಂದಣಿಗೆ ದಿನಾಂಕವನ್ನು ಜಾರಿಗೊಳಿಸಿದೆ.
ಒಂದು ವೇಳೆ ನೋಂದಣಿಯಾಗದೇ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್ ಮಠ, ಎನ್ಜಿಓಗಳಿಗೂ ಬೀಗ ಬೀಳಲಿದೆ ಎಂದು ಸರಕಾರ ಎಚ್ಚರಿಕೆಯನ್ನು ನೀಡಿದೆ. ಮದರಸ ಹಾಗೂ ಚರ್ಚ್ಗಳಲ್ಲಿ ಮಕ್ಕಳನ್ನ ದಾಖಲಿಸಿ. ಪಾಲನ ಸಂಸ್ಥೆಗಳನ್ನ ಸರ್ಕಾರದ ನೋಂದಣಿ ಇಲ್ಲದೆ ನಡೆಸುತ್ತಿದ್ದರೆ, ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ 2015 ಕಲಂ 41ರ ಅನ್ವಯ ಕಡ್ಡಾಯವಾಗಿ ಏಪ್ರಿಲ್ 20ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ಹೊರಡಿಸಿದ್ದಾರೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.