ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದ ಮಹಿಳೆಯರಿಗೆ ಸರ್ಕಾರ ಗುಡ್ನ್ಯೂಸ್ ಕೊಡುವ ಸಾಧ್ಯತೆ ಇದೆ. ಗೃಹಜ್ಯೋತಿ ಯಶಸ್ವಿ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನ ಜಾರಿ ಮಾಡಲು ಸಕಲ ಸಿದ್ದತೆಗಳನ್ನ ಮಾಡಿಕೊಳ್ತಿದೆ. ಗೃಹಲಕ್ಷ್ಮಿ ಯೋಜನೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗಲಿದೆ. ಯೋಜನೆಗೆ ಅರ್ಜಿ ಪ್ರಕ್ರಿಯೆ, ಹೊಸ ಅಪ್ಲಿಕೇಷನ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತೆ. ಬಳಿಕ ಕ್ಯಾಬಿನೆಟ್ ಸಭೆಯಲ್ಲಿ ಗ್ರೀನ್ ಸಿಗ್ನಲ್ ಪಡೆದು ಅಧಿಕೃತವಾಗಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.
ಒಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್ ಸರ್ಕಾರ, ಗೃಹಲಕ್ಷ್ಮೀ ಹೆಸರಲ್ಲೇ ಪ್ರತ್ಯೇಕವಾದ ಆ್ಯಪ್ ಸಿದ್ಧಪಡಿಸಲಾಗಿದ್ದು, ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಆ್ಯಪ್ ತಯಾರಿ ಮಾಡಲಾಗಿದೆ. ಇಂದಿನ ಕ್ಯಾಬಿನೆಟ್ ಸಭೆ ಬಳಿಕ ಆ್ಯಪ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನೂ ಸೇವಾಸಿಂಧು ವೆಬ್ಸೈಟ್ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್ನಲ್ಲಿ ಆ್ಯಪ್ ಲಭ್ಯವಾಗಲಿದೆ.