ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಲ್ಲ ಮಹಿಳೆಯರನ್ನು ತಲುಪಿಲ್ಲ. ಅದಕ್ಕಾಗಿಯೇ ಈಗ ರಾಜ್ಯ ಸರ್ಕಾರ ಮಾಸ್ಟರ್ ಪ್ಲ್ಯಾನ್ ಒಂದನ್ನು ಮಾಡಿಕೊಂಡಿದೆ.
ರಾಜ್ಯದಲ್ಲಿ ಒಟ್ಟು 1.10 ಕೋಟಿ ಗೃಹಲಕ್ಷ್ಮಿಯರಿಗೆ ಹಣ ಜಮೆಯಾಗಿದ್ರೂ 5-6 ಲಕ್ಷದಷ್ಟು ಮಹಿಳೆಯರಿಗೆ ತಾಂತ್ರಿಕ ದೋಷದಿಂದ ಹಣ ಜಮೆಯಾಗಿರಲಿಲ್ಲ. ಇದೀಗ ಗೃಹಲಕ್ಷ್ಮಿಯರಿದ್ದೆಡೆಗೆ ಅಧಿಕಾರಿಗಳು ತೆರಳಿ ಅದಾಲತ್ ನಡೆಸಲಿದ್ದಾರೆ. ಇನ್ನೊಂದು ವಾರದಲ್ಲಿ ಪಂಚಾಯತಿ, ನಗರಸಭೆ, ಪುರಸಭೆ ಸೇರಿದಂತೆ ರಾಜ್ಯಾದ್ಯಂತ ಅದಾಲತ್ ನಡೆಯಲಿದ್ದು ಅಕೌಂಟ್ಗೆ ದುಡ್ಡು ಬಾರದ ಮಹಿಳೆಯರು ಇಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಡಿಸೆಂಬರ್ 31 ರೊಳಗೆ ಎಲ್ಲಾ ಫಲಾನುಭವಿಗಳ ಅಕೌಂಟ್ಗೆ ಹಣ ಜಮೆ ಮಾಡಲು ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಇದರ ಮಧ್ಯೆ ಸುಮಾರು 50 ಸಾವಿರ ಟ್ಯಾಕ್ಸ್ ಪೇಯರ್ ಮಹಿಳೆಯರು ಕೂಡ ಗೃಹಲಕ್ಷ್ಮಿ ದುಡ್ಡಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇವರ ಅರ್ಜಿ ತಿರಸ್ಕಾರ ಮಾಡಿರೋದಾಗಿ ಹೆಬ್ಬಾಳ್ಕರ್ ಹೇಳಿದ್ದಾರೆ.