ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿತ್ತು. ಇದೀಗ ರಾಜ್ಯ ಸರ್ಕಾರ, ಎನ್ ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ತೋರಟ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ.
ಪ್ರೊ.ಸುಖ್ದೇವ್ ಥೋರಟ್ ಅವರ ನೇತೃತ್ವದಲ್ಲಿ 15 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ. 2024ರ ಫೆಬ್ರವರಿ 28ರೊಳಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡುವಂತೆ ಈ ಸಮಿತಿಗೆ ನಿರ್ದೇಶನ ನೀಡಲಾಗಿದೆ.
ಈ ಸಂಬಂಧ ಎಕ್ಸ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ… pic.twitter.com/LnQe96P6gN
— CM of Karnataka (@CMofKarnataka) October 11, 2023