News Karnataka Kannada
Monday, April 29 2024
ಬೆಂಗಳೂರು

ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧಾರ

Govt to intensify Covid testing
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ಭೀತಿ ಮತ್ತೆ ಆವರಿಸಿದ್ದು, ಇದರ ಬೆನ್ನಲ್ಲೇ ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಕೋವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ ಎಂದಿದ್ದಾರೆ.

ವಿಕಾಸ ಸೌಧದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಿಸೆಂಬರ್‌ 23ರಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುತ್ತದೆ. ಆಕ್ಸಿಜನ್‌, ವೆಂಟಿಲೇಟರ್‌, ಐಸಿಯು ಬೆಡ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ವರ್ಚುವಲ್‌ ಸಭೆ ನಡೆಸಿ ಕೋವಿಡ್‌ ಕುರಿತು ನಿಗಾ ಇಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶನಿವಾರದಿಂದ ಯಾರಿಗೆಲ್ಲ ಕೋವಿಡ್ ಪರೀಕ್ಷೆ?: ಶೀತ, ಜ್ವರ, ಕೆಮ್ಮು ಸೇರಿ ಕೊರೊನಾ ಲಕ್ಷಣ ಇದ್ದವರು, ತೀವ್ರ ಉಸಿರಾಟ ಸಮಸ್ಯೆ ಹೊಂದಿರುವವರು, ಬೇರೆ ದೇಶಗಳಿಂದ ಬಂದ ಸೋಂಕು ಲಕ್ಷಣ ಇದ್ದವರು, ಕೇರಳದಿಂದ ಬಂದ ಸೋಂಕು ಲಕ್ಷಣ ಇದ್ದವರು, ಹೃದ್ರೋಗ, ವಯೋಸಹಜ ಕಾಯಿಲೆ ಇರುವವರು, ವಿಷಮ ಶೀತ ಜ್ವರ ಲಕ್ಷಣ ಹೊಂದಿರುವವರು, ದೀರ್ಘಕಾಲದ ಅನಾರೋಗ್ಯ ಸಮಸ್ಯೆ ಇರುವವರಿಗೆ ಶನಿವಾರದಿಂದ ಕೋವಿಡ್ ಟೆಸ್ಟ್ ನಡೆಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು