ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿಯೂ ಗೆದ್ದು ಸರ್ಕಾರ ರಚಿಸುವ ವಿಶ್ವಾಸವನ್ನು ಡಿ.ಸಿ.ಎಮ್ ವ್ಯಕ್ತಪಡಿಸಿದ್ದಾರೆ. ಸಿದ್ದು ಸರ್ಕಾರದಿಂದ ಈಗ ರಾಜ್ಯದ ಜನತೆಗೆ ಸಿಗುತ್ತಿರುವ ಗ್ಯಾರೆಂಟಿ ಯೋಜನೆಗಳು ಉಳಿದ ನಾಲ್ಕು ವರ್ಷಗಳು ಮಾತ್ರವಲ್ಲ, ಮುಂದಿನ ಐದು ವರ್ಷಗಳವರೆಗೂ ಸಿಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ʼಬಿಜೆಪಿ ಜನರ ಭಾವನೆಗಳನ್ನು ಇಟ್ಟುಕೊಂಡು ರಾಜಕೀಯ ಮಾಡಿದರೆ ಕಾಂಗ್ರೆಸ್ ಜನರ ಬದುಕಿನ ಮೇಲೆ ಗಮನಹರಿಸುತ್ತದೆʼ ಎಂದು ಅವರು ಜಿಲ್ಲಾಡಳಿತ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಕವಿತೆ ವಾಚಿಸಿದ ಅವರು, ʼಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರೆಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು, ಸಮೃದ್ಧಿಯಾಯಿತುʼ ಎಂದರು.