ಬೆಂಗಳೂರು: ಅಪೆಕ್ಸ್ ಬ್ಯಾಂಕ್ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.
ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ನಿಂದ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದರು. ಆದ್ರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು.
ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್ಗೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕೋರ್ಟ್, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.