News Karnataka Kannada
Tuesday, April 30 2024
ಬೆಂಗಳೂರು

ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಸಹಕರಿಸುವಂತೆ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ

ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.
Photo Credit : News Kannada

ಬೆಂಗಳೂರು: ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚಿಸಿದೆ.

ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್​ನಿಂದ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದರು. ಆದ್ರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್​, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು